Search This Blog

Saturday, June 17, 2017

ಮನಮುಟ್ಟಿದ ಸಾಲುಗಳು..


1." ನೀವೇನನ್ನು ಬಯಸುತ್ತೀರೋ
ಅದನ್ನು ಪಡೆಯಲಾರಿರಿ. ಏನನ್ನು ಪಡೆದಿದ್ದೀರೋ ಅದನ್ನು ಅನುಭವಿಸಲಾರಿರಿ. ಏನನ್ನು ಅನುಭವಿಸುತ್ತಿದ್ದೀರೋ ಅದು ಶಾಶ್ವತವಲ್ಲ. ಯಾವುದು ಶಾಶ್ವತವೋ ಅದು ಬೇಸರ.
ಅದೇ ಬದುಕು"...
●●●●●●●
2. "ಎಲ್ಲಾ ಬೆರಳುಗಳೂ ಒಂದೇ ರೀತಿಯ ಅಳತೆಯನ್ನು ಹೊಂದಿಲ್ಲ.ಆದರೆ ಅವು ಬಗ್ಗಿ ನಿಂತರೆ ಎಲ್ಲವೂ ಒಂದೇ ಸಮನಾದೀತು. ಬದುಕಿನಲ್ಲೂ ಹಾಗೆ ನಾವು ಬಾಗುವುದಾದರೆ ಮತ್ತು ಸನ್ನಿವೇಶಗಳಿಗೆ ಹೊಂದಿಕೊಳುವುದಾದರೆ ಬದುಕು ತುಂಬಾ ಸರಳ"..
●●●●●●●
3. "ಜೀವನದ ಎಲ್ಲಾ ಕ್ಷಣಗಳೂ ನಿಮಗೆ ಸಂತೋಷದಾಯಕ ಆಗಲಾರದು. ದಿನದ ಎಲ್ಲಾ ಘಟನೆಗಳು ನಿಮಗೆ
ಸಮಧಾನವೆನಿಸಲಾರದು. ಆದರೆ ಒಂದು ಸಂಗತಿ ಮಾತ್ರ ನಿಮಗೆ ಅತ್ಯಂತ ಖುಷಿಯೆನಿಸುವದು.
ಅದು ಯಾವುದೆಂದರೆ ಬೇರೆಯವರ
ಕಣ್ಣುಗಳಲಿ ನೀವು ಕಾಣುವ ನಿಮ್ಮ ಬಗೆಗಿನ ಕಾಳಜಿ"...
●●●●●●●
4. "ಒಂದು ಪಾತರಗಿತ್ತಿ 14 ದಿನಗಳ ಕಾಲ ಮಾತ್ರ ಬದುಕುಳಿಯುವದು. ಆದರೆ ಅದು ಪ್ರತಿದಿನ ಅತ್ಯಂತ ಸಂತೋಷದಿಂದ ಹಾರಾಡುವದು ಮತ್ತು ಹಲವರ ಹೃದಯಗಳನ್ನ ಗೆಲ್ಲುವುದು ಪ್ರತಿ ಕ್ಷಣವೂ ಅತ್ಯಂತ ಪ್ರಮುಖ. ಯಾವಾಗಲೂ ಸುಖ ಸಂತೋಷದಿಂದಿರಿ"...
●●●●●●
5. "ಕಾಲಿಗೆ ಬೂಟುಗಳಿಲ್ಲವೆಂದು ನಾನು ಅಳುತ್ತಿದ್ದೆ. ಆದರೆ ಕಾಲುಗಳೇ ಇಲ್ಲದ ವ್ಯಕ್ತಿಯನು ಕಂಡಾಗ ನಾನು ಅಳುವುದನ್ನು ನಿಲ್ಲಿಸಿಬಿಟ್ಟೆ. ಬದುಕು ಆಶೀರ್ವಾದಗಳ ಸಂತೆ.ನಾವು ಅದನ್ನು ಅರ್ಥ ಮಾಡಿಕೊಳ್ಳಬೇಕು"...
●●●●●●●
6. "ಯಾರಾದರೂ ಬಹು ಬೇಗ ಸತ್ತು
ಹೋದರೆ ದೇವರು ಅವನನ್ನು ತುಂಬಾ ಪ್ರೀತಿಸುತ್ತಾನೆಂದು ಜನ ಅಭಿಪ್ರಾಯ ಪಡುತ್ತಾರೆ. ಆದರೆ ಭೂಮಿಯ ಮೇಲೆ ಇನ್ನೂ ಬದುಕಿದ್ದೇವೆಂದರೆ ಏನರ್ಥ?
ಈ ಭೂಮಿಯ ಮೇಲೆ ಯಾರೋ ದೇವರಿಗಿಂತ ನಮ್ಮನ್ನು ಹೆಚ್ಚಾಗಿ ಪ್ರೀತಿಸುತ್ತಾರೆ ಎಂದರ್ಥ"...
●●●●●●●
7. "ನೋವುಂಡ ಹೃದಯ ಸಣ್ಣ ಮಕ್ಕಳಂತೆ. ಅದು ಅಳಬಹುದೇ ಹೊರತು ತನ್ನ ಭಾವನೆಗಳನು ಹಂಚಿಕೊಳ್ಳದು .ಆದ್ದರಿಂದ ನಿಮ್ಮನ್ನು ಪ್ರೀತಿಸುವ ಮತ್ತು ನಿಮ್ಮ ಮೇಲೆ ಕಾಳಜಿ ತೋರುವ ಯಾರನ್ನು ನೋಯಿಸಬೇಡಿ"...
●●●●●●●
8. "ಒಳ್ಳೆಯ ರಸ್ತೆ ಒಬ್ಬ ಒಳ್ಳೆಯ ಚಾಲಕನನ್ನು ರೂಪಿಸಲಾರದು. ಶಾಂತವಾಗಿರುವ ಸಾಗರ ಒಬ್ಬ ಒಳ್ಳೆಯ ನಾವಿಕನನು ರೂಪಿಸಲಾರದು. ತಿಳಿಯಾದ ಆಕಾಶ ಒಬ್ಬ ಒಳ್ಳೆಯ ವಿಮಾನ ಚಾಲಕನನ್ನು ರೂಪಿಸಲಾರದು. ಸಮಸ್ಯೆಗಳೇ ಇಲ್ಲದ ಜೀವನ ಎಂದಿಗೂ ಸಾಧಕರನು ರೂಪಿಸದು"...
●●●●●●●
9. "ಸಮಯ ನಮಗಾಗಿ ಕಾಯುವುದಿಲ್ಲ ಎಂದಾದರೆ ನಾವೇಕೆ ಯೋಗ್ಯ ಸಮಯಕ್ಕಾಗಿ ಯಾವಾಗಲೂ ಕಾಯಬೇಕು?
ಒಳ್ಳೆಯ ಕೆಲಸ ಮಾಡುವುದಕೆ ಯಾವಾಗಲೂ ಕೆಟ್ಟ ಸಮಯ ಎಂದಿರುವದಿಲ್ಲ"...
●●●●●●

No comments:

Post a Comment